ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಬೇಸರದಿಂದ ಮೋಶೆಯ ವಿರುದ್ಧ ಗೊಣಗುಟ್ಟಿದರು. “ನೀನು ನಮ್ಮನ್ನು, ನಮ್ಮ ಮಕ್ಕಳನ್ನು ಹಾಗು ದನಕರುಗಳನ್ನು ಈಜಿಪ್ಟಿನಿಂದ ಕರೆದು ತಂದದ್ದು ಏಕೆ? ನೀರಿಲ್ಲದೆ ಸಾಯಿಸುವುದಕ್ಕೋ?” ಎಂದು ದೂರಿದರು.