ಹೀಗೆ ಅವರು ಕ್ರಮವಿಲ್ಲದೆ ಸ್ವೇಚ್ಛಾಚಾರದಿಂದ ನಡೆದುಕೊಳ್ಳುವುದನ್ನು ಮೋಶೆ ನೋಡಿ, ಪಾಳೆಯದ ಹೊರಬಾಗಿಲಲ್ಲಿ ನಿಂತುಕೊಂಡು, “ಸರ್ವೇಶ್ವರನ ಪರವಾಗಿರುವವರೆಲ್ಲರು ನನ್ನ ಬಳಿಗೆ ಬರಬೇಕು,” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರು ಅವನ ಬಳಿಗೆ ಕೂಡಿಬಂದರು.