ಅವನು ಆ ಪ್ರಾಣಿಯನ್ನು ಸರ್ವೇಶ್ವರನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯಿಡಬೇಕು; ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.