ಜನರೆಲ್ಲರ ದೋಷಪರಿಹಾರಕ್ಕಾಗಿ ಸಮರ್ಪಿತವಾದ ಹೋತದ ಬಗ್ಗೆ ಅದು ಏನಾಯಿತೆಂದು ಮೋಶೆ ವಿಚಾರಿಸಿದಾಗ ಅದನ್ನು ಸುಟ್ಟುಬಿಟ್ಟರೆಂದು ತಿಳಿದುಬಂದಿತು. ಇದನ್ನು ಕೇಳಿ ಮೋಶೆ, ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡನು.