ಆದರೆ ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಬಲಿಪೀಠದ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.