ಅವು ಆರೋನನಿಗೂ ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಆ ರೊಟ್ಟಿಗಳನ್ನು ದೇವಸ್ಥಾನದ ಪ್ರಾಕಾರದಲ್ಲೇ ತಿನ್ನಬೇಕು. ಅವು ಸರ್ವೇಶ್ವರನಿಗೆ ಸಮರ್ಪಿತವಾದ ದಹನದ್ರವ್ಯಗಳಿಗೆ ಸೇರಿದವುಗಳಾಗಿರುವುದರಿಂದ ಶಾಶ್ವತ ನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು.