ಆದರೆ ಏಳನೆಯ ವರ್ಷ ಯಾವ ವ್ಯವಸಾಯವನ್ನೂ ಮಾಡಬಾರದು. ಅದು ವಿಶ್ರಾಂತಿಕಾಲವಾಗಿಯೂ ಸರ್ವೇಶ್ವರನ ಗೌರವಾರ್ಥ ಸಬ್ಬತ್ ಕಾಲವಾಗಿಯೂ ಇರಬೇಕು. ಆ ವರ್ಷ ಹೊಲದಲ್ಲಿ ವ್ಯವಸಾಯ ಮಾಡಬಾರದು; ದ್ರಾಕ್ಷೀ ತೋಟದ ಕೆಲಸವನ್ನೂ ಕೈಬಿಡಬೇಕು.