ಆದರೆ ಅವರು ಬಿಟ್ಟುಹೋದ ಸ್ವಂತ ನಾಡು ಮೊಟ್ಟಮೊದಲು ನಿರ್ಜನವಾಗಬೇಕು; ಅದು ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು; ಅವರು ಸರ್ವೇಶ್ವರನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣ ತಮ್ಮ ಪಾಪದ ಫಲವನ್ನು ಸವಿಯಬೇಕು.