ಒಬ್ಬನು ತಾನು ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಾಸ್ಕ ಹಬ್ಬವನ್ನು ಆಚರಿಸಲು ತಪ್ಪಿದ್ದೇ ಆದರೆ ಅಂಥವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಸರ್ವೇಶ್ವರನಿಂದ ನಿಯಮಿತವಾದ ಬಲಿಯನ್ನು ಸಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ಪಾಪಫಲವನ್ನು ಅನುಭವಿಸಲೇಬೇಕು.