ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಪೀಡಿಸುವ ಶತ್ರುಗಳ ಮೇಲೆ ಯುದ್ಧಕ್ಕೆ ಹೊರಡುವಾಗ ಆ ಕಹಳೆಗಳನ್ನು ಆರ್ಭಟವಾಗಿ ಮೊಳಗಿಸಬೇಕು. ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ನೆನಪಿಗೆ ತಂದುಕೊಂಡು ಶತ್ರುಗಳ ಕೈಯಿಂದ ನಿಮ್ಮನ್ನು ಬಿಡಿಸುವರು.