ನನ್ನ ದಾಸನಾದ ಕಾಲೇಬನಾದರೋ ಅವರಂಥ ಮನಸ್ಸುಳ್ಳವನಾಗಿರದೆ ಮನಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದಿದ್ದಾನೆ. ಆದ್ದರಿಂದ ಅವನು ಸಂಚರಿಸಿ ಬಂದ ಆ ನಾಡಿಗೆ ಅವನನ್ನು ಸೇರಿಸುವೆನು. ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.