ಮೋಶೆ, ಆರೋನನನ್ನು ಉದ್ದೇಶಿಸಿ, “ಸರ್ವೇಶ್ವರನಿಗೆ ಕೋಪವುಂಟಾಗಿದೆ: ಈ ಜನರೊಳಗೆ ಘೋರ ವ್ಯಾಧಿಯೊಂದು ಪ್ರಾರಂಭವಾಗಿಬಿಟ್ಟಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಬಲಿಪೀಠದಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮುದಾಯದವರ ಬಳಿಗೆ ಬೇಗ ಹೋಗು; ಅವರ ಪರವಾಗಿ ದೋಷಪರಿಹಾರವನ್ನು ಮಾಡು,” ಎಂದು ಹೇಳಿದನು.
Go to Home Page