ಅನಂತರ ಸರ್ವೇಶ್ವರ ಮೋಶೆಗೆ: “ಆರೋನನ ಕೋಲನ್ನು ಮರಳಿ ಮಂಜೂಷದ ಮುಂದೆ ಇಡಬೇಕು. ದಂಗೆಯೇಳುವವರಿಗೆ ದೃಷ್ಟಾಂತವಾಗಿ ಅದು ಅಲ್ಲೇ ಇರಲಿ. ಇನ್ನು ಮುಂದೆ ಈ ಜನರು ನನಗೆ ವಿರುದ್ಧ ಗೊಣಗಿ ನಾಶವಾಗಬಾರದು. ಅದಕ್ಕಾಗಿ ನೀನು ಹೀಗೆ ಮಾಡು,” ಎಂದು ಆಜ್ಞಾಪಿಸಿದರು.