ಬಳಿಕ ಸರ್ವೇಶ್ವರ ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದೇಹೋದಿರಿ. ಇಸ್ರಯೇಲರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದಿರಿ. ಆದುದರಿಂದ ಈ ಸಮಾಜದವರನ್ನು ನಾನು ವಾಗ್ದಾನಮಾಡಿದ ನಾಡಿಗೆ ನೀವು ಕರೆದುಕೊಂಡು ಹೋಗಕೂಡದು,” ಎಂದು ಹೇಳಿದರು.