ಆದುದರಿಂದ ಇಸ್ರಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ, ಅಭಿವೃದ್ಧಿಯಾಗುವಂತೆ, ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ.