ನೀವು ಯಾವ ದೇಶದಿಂದ ನಮ್ಮನ್ನು ಬರಮಾಡಿದಿರೋ ಆ ದೇಶದವರು, ‘ಸರ್ವೇಶ್ವರ ಇಸ್ರಯೇಲರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಲಾರದೆ ಹಗೆಮಾಡಿ, ಮರುಭೂಮಿಯಲ್ಲಿ ಕೊಲ್ಲುವುದಕ್ಕೇ ಕರೆದುಕೊಂಡು ಹೋದರು’ ಎಂದು ಹೇಳುವುದಕ್ಕೆ ಆಸ್ಪದವಾದೀತು.