“ಒಬ್ಬನು ಸ್ವದೇಶದವನಾದ ಇಸ್ರಯೇಲನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಿಬಿಡಬೇಕು.