ಆಕಾನನು ಯೆಹೂದ್ಯ ಕುಲದವನು, ಜೆರಹನ ಗೋತ್ರದವನು, ಕರ್ಮೀಯ ಮಗನೂ ಜಬ್ದೀಯ ಕುಟುಂಬದವನೂ ಆಗಿದ್ದನು. ಸರ್ವೇಶ್ವರಸ್ವಾಮಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಈತ ಕೆಲವನ್ನು ಕದ್ದುಕೊಂಡನು. ಈ ಕಾರಣ ಇಸ್ರಯೇಲರೆಲ್ಲರು ದ್ರೋಹಿಗಳಾದರು. ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು.