ಯೆಹೋಶುವನು ಆಕಾನನಿಗೆ, “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ದಿನ ಸರ್ವೇಶ್ವರ ನಿನ್ನ ಮೇಲೆ ಆಪತ್ತು ಬರಮಾಡುವರು,” ಎಂದ ಕೂಡಲೆ ಇಸ್ರಯೇಲರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಕಲ್ಲೆಸೆದದ್ದು ಮಾತ್ರವಲ್ಲ, ಅವನಿಗೆ ಇದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟರು.