ಅವರು ಇಸ್ರಯೇಲರಿಗೆ ಬೆಂಗೊಟ್ಟು ಬೇತ್ ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಸರ್ವೇಶ್ವರ ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಈ ಕಾರಣ ಅನೇಕರು ಸತ್ತರು. ಇಸ್ರಯೇಲರ ಕತ್ತಿಗೆ ಈಡಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚುಮಂದಿ.