ಸರ್ವೇಶ್ವರ ಮೋಶೆಯ ಮುಖಾಂತರ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವ ಹಿಡಿದುಕೊಂಡನು, ಇಸ್ರಯೇಲ್ ಕುಲಭಾಗಗಳಿಗನುಸಾರ ಅದನ್ನು ಹಂಚಿಕೊಟ್ಟನು. ಯುದ್ಧ ನಿಂತಿತು. ದೇಶದಲ್ಲೆಲ್ಲಾ ಶಾಂತಿಸಮಾಧಾನ ನೆಲೆಸಿತು.