ಆಗ ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಕುಲದ ಅರ್ಧಜನರು ಕಾನಾನ್ ನಾಡಿನ ಶಿಲೋವಿನಲ್ಲಿದ್ದ ಇಸ್ರಯೇಲರನ್ನು ಬಿಟ್ಟು ಸರ್ವೇಶ್ವರನ ಆಜ್ಞೆಗನುಸಾರ ಮೋಶೆಯಿಂದ ತಮಗೆ ದೊರಕಿದ ಸೊತ್ತಾದ ಗಿಲ್ಯಾದ್ ನಾಡಿಗೆ ಹೋದರು.