“ಸರ್ವೇಶ್ವರನ ಸರ್ವಸಭೆ ಹೇಳುವ ಮಾತಿದು: ನೀವು ಇಸ್ರಯೇಲ್ ದೇವರಿಗೆ ವಿರುದ್ಧ ಇಂಥ ದ್ರೋಹ ಮಾಡಿದ್ದೇಕೆ? ನೀವು ನಿಮಗಾಗಿಯೇ ಒಂದು ಬಲಿಪೀಠವನ್ನು ಕಟ್ಟಿಕೊಂಡಿದ್ದೀರಿ. ಇದರಿಂದ ನೀವು ಸರ್ವೇಶ್ವರನಿಗೆ ವಿಮುಖವಾದಂತಾಯಿತು; ನೀವು ಇಂದು ಸರ್ವೇಶ್ವರನಿಗೆ ವಿರುದ್ಧ ತಿರುಗಿಬಿದ್ದಂತಾಯಿತು.