ನಾವು ದಾಸತ್ವದಲ್ಲಿದ್ದ ಈಜಿಪ್ಟಿನಿಂದ ನಮ್ಮನ್ನೂ ನಮ್ಮ ಪೂರ್ವಜರನ್ನೂ ಹೊರತಂದವರು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ. ನಮ್ಮೆದುರಿನಲ್ಲೇ ಅವರು ಮಾಡಿದ ಅದ್ಭುತಕಾರ್ಯಗಳನ್ನು ನೋಡಿದ್ದೇವೆ. ನಮ್ಮ ಎಲ್ಲಾ ಪ್ರಯಾಣಗಳಲ್ಲೂ ನಾವು ದಾಟಿಬಂದ ಜನಾಂಗಗಳಿಂದ ನಮ್ಮನ್ನು ಕಾಪಾಡಿದವರು ಅವರೇ.