ವೈರಿಗಳ ಹಿಂಸೆಯನ್ನು ತಾಳಲಾರದೆ ಇಸ್ರಯೇಲರು ಗೋಳು ಇಟ್ಟರು. ಸರ್ವೇಶ್ವರ ಅದನ್ನು ಕೇಳಿ ಕನಿಕರಪಟ್ಟು ನ್ಯಾಯಾಧಿಪತಿಗಳನ್ನು ಕಳುಹಿಸಿಕೊಟ್ಟರು; ಜೀವಮಾನವೆಲ್ಲ ಅವರ ಸಂಗಡವೇ ಇದ್ದು ಅವರ ಮುಖಾಂತರ ಇಸ್ರಯೇಲರನ್ನು ಶತ್ರುಗಳಿಂದ ಬಿಡಿಸಿದರು. ತಮ್ಮನ್ನು ಹಿಂಸಿಸುತ್ತಿದ್ದವರ ಕಾಟವನ್ನು ತಾಳದೆ ಮೊರೆಯಿಡುವುದನ್ನು ಸರ್ವೇಶ್ವರ ಕೇಳಿ ಮನಮರುಗಿದರು.
Go to Home Page