ಆ ಅರಸನು ದೂತರಿಗೆ, “ಇಸ್ರಯೇಲರು ಈಜಿಪ್ಟಿನಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್, ಜೋರ್ಡನ್ ನದಿಗಳವರೆಗೂ ಇದ್ದು ನನ್ನ ದೇಶವನ್ನು ಕಸಿದುಕೊಂಡರಲ್ಲವೆ? ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು,” ಎಂದು ಹೇಳಿ ಕಳುಹಿಸಿದನು.