ಆಕೆ, “ಇಲ್ಲ ಸ್ವಾಮಿ, ನಾನು ಕುಡಿದಿಲ್ಲ, ನಾನು ಬಹಳ ದುಃಖಪೀಡಿತಳು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಸರ್ವೇಶ್ವರನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.