ಲೇವಿಯರು ಸರ್ವೇಶ್ವರನ ಮಂಜೂಷವನ್ನು ಹಾಗು ಚಿನ್ನದ ವಸ್ತುಗಳಿದ್ದ ಚಿಕ್ಕಪೆಟ್ಟಿಗೆಯನ್ನು ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟರು. ಬೇತ್ಷೆಮೆಷಿನವರು ಅದೇ ದಿನ ಸರ್ವೇಶ್ವರನಿಗೆ ದಹನಬಲಿಗಳನ್ನು ಹಾಗು ಶಾಂತಿಸಮಾಧಾನದ ಬಲಿಗಳನ್ನು ಸಮರ್ಪಿಸಿದರು.