ಹೇಗೆಂದರೆ, ಸಮುವೇಲನು ಬಲಿಯನ್ನರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಯುದ್ಧಕ್ಕಾಗಿ ಸಮೀಪಿಸಿದರು. ಸರ್ವೇಶ್ವರ ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ, ಇಸ್ರಯೇಲರಿಗೆ ಸೋತು ಓಡಿಹೋಗುವಂತೆ ಮಾಡಿದರು.