ಆ ದಿವಸ ಸೌಲನು ಇಸ್ರಯೇಲರಿಗೆ, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕಾಗಿ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತ,” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹಳವಾಗಿ ಬಳಲಿಹೋಗಿದ್ದರು. ಒಬ್ಬನಾದರೂ ಆಹಾರಪದಾರ್ಥವನ್ನು ರುಚಿಸಿರಲಿಲ್ಲ.