ಅಬೀಷೈಯು ದಾವೀದನಿಗೆ, “ದೇವರು ಈ ದಿನ ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾರೆ; ಅಪ್ಪಣೆಯಾಗಲಿ, ನಾನು ಭರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಕಚ್ಚಿಕೊಳ್ಳುವಂತೆ ತಿವಿಯುತ್ತೇನೆ. ಎರಡನೆಯ ಸಾರಿ ಹೊಡೆಯುವ ಅವಶ್ಯಕತೆ ಇರುವುದಿಲ್ಲ,” ಎಂದು ಹೇಳಿದನು.