ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.