ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದಕೂಡಲೆ ಅವನನ್ನು ಹೊಡೆದು ಕೊಂದುಹಾಕಿ; ಹೆದರಬೇಡಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೆ? ಧೈರ್ಯದಿಂದಿರಿ, ಶೂರರಾಗಿರಿ,” ಎಂದು ಹೇಳಿದ್ದನು.