ದಾವೀದನ ಕಾಲದಲ್ಲಿ ಮೂರು ವರ್ಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದಾಗ, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೂ ಅವನ ಮನೆಯವರ ಮೇಲೂ ರಕ್ತಾಪರಾಧ ಇರುತ್ತದೆ,” ಎಂಬ ಉತ್ತರ ದೊರಕಿತು.