ಈಗಾಗಲೇ ಅಬ್ಷಾಲೋಮನು ಸತ್ತುಹೋಗಿದ್ದನು. ದಾವೀದನಿಗೆ ಹಗ್ಗೀತಳಲ್ಲಿ ಹುಟ್ಟಿದ ಅದೋನಿಯನೇ ಜೀವದಿಂದ ಉಳಿದವರಲ್ಲಿ ಹಿರಿಯ ಮಗ. ಅವನು ಬಹಳ ಸುಂದರನು. ದಾವೀದನು ಯಾವುದೇ ವಿಷಯದಲ್ಲಿ ಅವನನ್ನು ಎಂದೂ ಗದರಿಸಿರಲಿಲ್ಲ. ತಾನೇ ರಾಜನಾಗಬೇಕೆಂಬ ಆಕಾಂಕ್ಷೆ ಅವನದು. ಎಂದೇ ತನಗೋಸ್ಕರ ರಥ, ರಥಾಶ್ವಗಳನ್ನು ಹಾಗು ಐವತ್ತು ಮಂದಿ ಬೆಂಗಾವಲಿಗರನ್ನು ನೇಮಿಸಿಕೊಂಡಿದ್ದನು.
Go to Home Page