ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟನು. “ಈ ಮಹಾಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತ ಮಗನನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದು ನುಡಿದನು.