ಅನೇಕ ದಿವಸಗಳಾದನಂತರ ಎಲೀಯನಿಗೆ ಸರ್ವೇಶ್ವರನ ವಾಣಿ ಉಂಟಾಯಿತು. ಬರಗಾಲದ ಮೂರನೆಯವರ್ಷದಲ್ಲಿ ಸರ್ವೇಶ್ವರ ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು; ನಾನು ನಾಡಿಗೆ ಮಳೆಕೊಡುತ್ತೇನೆ,” ಎಂದರು.