ಆಗ ಆ ಪ್ರವಾದಿ ಅವನಿಗೆ, “ನೀನು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ನನ್ನನ್ನು ಬಿಟ್ಟು ಹೊರಟಕೂಡಲೆ ಒಂದು ಸಿಂಹವು ಬಂದು ನಿನ್ನನ್ನು ಕೊಲ್ಲುವುದು,” ಎಂದನು. ಅಂತೆಯೇ ಅವನು ಇವನನ್ನು ಬಿಟ್ಟುಹೋದ ಕೂಡಲೆ, ಒಂದು ಸಿಂಹವು ಬಂದು ಅವನನ್ನು ಕೊಂದುಹಾಕಿತು.