ತರುವಾಯ ಕುಪ್ಪಿಯಲ್ಲಿರುವ ಈ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, ‘ನಾನು ನಿನ್ನನ್ನು ಇಸ್ರಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆಂದು ಸರ್ವೇಶ್ವರ ನುಡಿದಿದ್ದಾರೆ,’ ಎಂಬುದಾಗಿ ಹೇಳಿ ಕೂಡಲೆ ಬಾಗಿಲು ತೆರೆದು ಓಡಿಹೋಗು,” ಎಂದು ಆಜ್ಞಾಪಿಸಿದನು.