ಕೆಲವು ವರ್ಷಗಳಾದನಂತರ, ಇವನು ಪ್ರತಿ ವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದನು; ಅದು ಮಾತ್ರವಲ್ಲ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದನು. ಈ ಕಾರಣ ಅಸ್ಸೀರಿಯದ ಅರಸನು ಇವನನ್ನು ದ್ರೋಹಿಯೆಂದು ತಿಳಿದು, ಬಂಧಿಸಿ ಸೆರೆಯಲ್ಲಿಟ್ಟನು.