ಹೀಗೆ ಇಸ್ರಯೇಲಿನ ನಾಯಕರೆಲ್ಲರೂ ಹೆಬ್ರೋನಿನಲ್ಲಿ ಅರಸ ದಾವೀದನ ಬಳಿಗೆ ಬಂದು ಬಿನ್ನವಿಸಿದರು. ದಾವೀದನು ಅವರೊಂದಿಗೆ ಸರ್ವೇಶ್ವರನ ಸನ್ನಿಧಿಯಲ್ಲಿ ಒಂದು ಒಪ್ಪಂದ ಮಾಡಿಕೊಂಡನು. ಅವರು ಅವನನ್ನು ಅಭಿಷೇಕಿಸಿದರು. ಹೀಗೆ ಸರ್ವೇಶ್ವರ ಸಮುವೇಲನ ಮುಖಾಂತರ ಮಾಡಿದ ವಾಗ್ದಾನ ನೆರವೇರಿತು; ದಾವೀದನು ಇಸ್ರಯೇಲರ ಅರಸನಾದನು.
Go to Home Page