ಮರುವರ್ಷ, ಅರಸರು ಯುದ್ಧಕ್ಕೆ ಹೊರಡುವ ಕಾಲದಲ್ಲಿ ಯೋವಾಬನು ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದನು. ಅವನೊಡನೆ ಬಲವಾದ ಸೈನ್ಯವಿತ್ತು. ದಾವೀದನು ಜೆರುಸಲೇಮಿನಲ್ಲೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದನ್ನು ಹಾಳುಮಾಡಿಬಿಟ್ಟನು.