ದಾವೀದನು ಅವನಿಗೆ, “ನಿನ್ನ ಕಣವನ್ನೂ ಭೂಮಿಯನ್ನೂ ನನಗೆ ಕೊಡು; ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ಅದರಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸುತ್ತೇನೆ; ಪೂರ್ಣ ಕ್ರಯ ತೆಗೆದುಕೊಂಡು ಅದನ್ನು ಕೊಡು,” ಎಂದು ಹೇಳಿದನು.