ಇದಲ್ಲದೆ, ತನ್ನ ತಂದೆ ದಾವೀದನ ವಿಧಿಗೆ ಅನುಸಾರವಾಗಿ ಯಾಜಕ ವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡಬೇಕಾಗಿತ್ತು. ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯಬೇಕಾಗಿತ್ತು. ಇದು ದೈವಪುರುಷ ದಾವೀದರಾಜನ ಅಪ್ಪಣೆ ಆಗಿತ್ತು.
Go to Home Page