ಆಗ ಪ್ರವಾದಿ ಶೆಮಾಯನು ರೆಹಬ್ಬಾಮನ ಬಳಿಗೆ ಹಾಗೂ ಶೀಶಕನಿಗೆ ಹೆದರಿ ಜೆರುಸಲೇಮಿನಲ್ಲಿ ಕೂಡಿದ್ದ ಯೆಹೂದ್ಯ ಪ್ರಧಾನರ ಬಳಿಗೆ ಬಂದು, “ನೀವು ನನ್ನನ್ನು ಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಗೆ ಬಿಟ್ಟುಬಿಟ್ಟಿದ್ದೇನೆ,” ಎನ್ನುತ್ತಾರೆ ಸರ್ವೇಶ್ವರ ಎಂದು ಹೇಳಿದನು.