ಅಮಚ್ಯನು ಸರ್ವೇಶ್ವರನ ಭಕ್ತಿಯನ್ನು ಬಿಟ್ಟಂದಿನಿಂದ ಜೆರುಸಲೇಮಿನವರು ಅವನಿಗೆ ವಿರುದ್ಧ ಒಳಸಂಚು ಮಾಡುತ್ತಿದ್ದರು. ಆದುದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.