ಅನ್ಯದೇವತಾ ಪ್ರತಿಮೆಗಳನ್ನು ಹಾಗು ತಾನು ಮಾಡಿಸಿದ್ದ ಸ್ತಂಭವನ್ನು ಸರ್ವೇಶ್ವರನ ಆಲಯದಿಂದ ತೆಗಿಸಿದನು. ಸರ್ವೇಶ್ವರನ ಮಂದಿರವಿರುವ ಗುಡ್ಡದಲ್ಲೂ ಜೆರುಸಲೇಮಿನಲ್ಲೂ ಕಟ್ಟಿಸಿದ್ದ ಎಲ್ಲ ಯಜ್ಞವೇದಿಗಳನ್ನು ಕೆಡವಿ, ಅವುಗಳನ್ನು ಪಟ್ಟಣದ ಹೊರಗೆ ಹಾಕಿಸಿದನು.