ನಾನು ಅವರಿಗೆ, “ಪರಲೋಕದೇವರು ನಮಗೆ ಸಫಲತೆಯನ್ನು ಅನುಗ್ರಹಿಸುವರು. ಆದುದರಿಂದ ಅವರ ದಾಸರಾದ ನಾವು ಕೋಟೆಯ ಗೋಡೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದೇವೆ. ನಿಮಗಾದರೋ ಜೆರುಸಲೇಮಿನಲ್ಲಿ ಪಾಲಾಗಲಿ, ಹಕ್ಕಾಗಲಿ, ಸ್ಮಾರಕವಾಗಲಿ ಇರುವುದಿಲ್ಲ,” ಎಂದು ಉತ್ತರಕೊಟ್ಟೆ.