ಕೂಡಲೆ ಅರಸನು, “ಯಾರಲ್ಲಿ, ಅಂಗಳದಲ್ಲಿ?” ಎಂದು ವಿಚಾರಿಸಿದನು. ಅಷ್ಟರಲ್ಲಿ, ತಾನೇ ಸಿದ್ಧಮಾಡಿಸಿದ್ದ ಗಲ್ಲುಮರಕ್ಕೆ ಮೊರ್ದೆಕೈಯನ್ನು ನೇಣುಹಾಕಿಸಲು ಅರಸನ ಅಪ್ಪಣೆಯನ್ನು ಪಡೆಯುವುದಕ್ಕೋಸ್ಕರ ಹಾಮಾನನು ಆಗತಾನೆ ಅರಮನೆಯ ಹೊರಗಣ ಅಂಗಳಕ್ಕೆ ಬಂದಿದ್ದನು.