ಸರ್ವೇಶ್ವರ ಸೈತಾನನಿಗೆ, “ನೋಡು, ಆತನ ಆಸ್ತಿಪಾಸ್ತಿಯೆಲ್ಲ ನಿನ್ನ ಕೈವಶಕ್ಕೆ ಬಿಟ್ಟಿದ್ದೇನೆ. ಆತನ ಮೈಮೇಲೆ ಮಾತ್ರ ಕೈಹಾಕಬೇಡ,” ಎಂದು ಅಪ್ಪಣೆಕೊಟ್ಟರು. ಕೂಡಲೆ ಸೈತಾನನು ಸರ್ವೇಶ್ವರರ ಸನ್ನಿಧಾನದಿಂದ ಹೊರಟುಹೋದನು.